ಎ.22.ಮತ್ತು ಎ.23: ಪಂಜದ ಅಳ್ಪೆ ಚಿಂಗಾಣಿಗುಡ್ಡೆ ದೈವಸ್ಥಾನದಲ್ಲಿ ವಾರ್ಷಿಕ ತಂಬಿಲ ಹಾಗೂ ನೇಮೋತ್ಸವ -ಆಮಂತ್ರಣ ಪತ್ರಿಕೆ ಬಿಡುಗಡೆ

0

ಪಂಜದ ಅಳ್ಪೆ ಚಿಂಗಾಣಿಗುಡ್ಡೆ ಶ್ರೀ ಉಳ್ಳಾಕುಲು ಉಳ್ಳಾಲ್ತಿ,ಮಹಿಷಂತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಇದರ ವಾರ್ಷಿಕ ತಂಬಿಲ ಮತ್ತು ನೇಮೋತ್ಸವ ಎ.22 ಮತ್ತು ಎ.23 ರಂದು ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.27ರಂದು ಜರುಗಿತು.

ಪಂಜದ ತೊಂಡಚ್ಚನ್ ಇಂಡಸ್ಟ್ರೀಸ್ ಮಾಲಕ ಮನು ಯಂ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.

ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಭರತ್ ರಾಮತೋಟ, ಕಾರ್ಯದರ್ಶಿ ಕುಸುಮಾಧರ ಕರಿಮಜಲು,ಉತ್ಸವ ಸಮಿತಿಯ ಅಧ್ಯಕ್ಷ ವಿದ್ಯಾನಂದ ಮೇಲ್ಮನೆ, ಕಾರ್ಯದರ್ಶಿ ನಿತಿನ್ ತೋಟ, ಕೋಶಾಧಿಕಾರಿ ಗಣೇಶ್ ಪಾಲೋಳಿ ಆಡಳಿತ ಮಂಡಳಿ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕುಸುಮಾಧರ ಕರಿಮಜಲು ಸ್ವಾಗತಿಸಿದರು.ಗುರುಪ್ರಸಾದ್ ತೋಟ ವಂದಿಸಿದರು.