ಸುಳ್ಯ ಶಾಂತಿನಗರದಿಂಧ ಮರ ಸಾಗಾಟ ಯತ್ನ : ಮರ ಸಾಗಾಟ ಲಾರಿ, ಕ್ರೇನ್ ಸಹಿತ ನಾಲ್ಕು ಮಂದಿ ವಶ

0

ಮಾ.28ರಂದು ಸುಳ್ಯ ಅರಣ್ಯ ಶಾಖೆಯ ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣವನ್ನು ಸುಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ ಪಿ. ಎನ್. ನೇತೃತ್ವದ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿದೆ.

ಪ್ರಕರಣದಲ್ಲಿ ಅಕ್ರಮ ಸಾಗಾಟಕ್ಕೆ ಬಳಸಲಾದ 1 ಲಾರಿ, 1ಕ್ರೇನ್, ಹಾಗೂ 7.946 ಘ. ಮೀ. ಮರದ ದಿಮ್ಮಿ‌ಹಾಗೂ ಪ್ರಕರಣದ ಆರೋಪಿಗಳಾದ ಸ್ಥಳದ ಮಾಲಿಕ ಕೆ. ಕೃಷ್ಣಪ್ಪ ನಾಯ್ಕ ಶಾಂತಿನಗ, ಮರದ ವ್ಯಾಪಾರಿ ರಿಫಾಯಿ ಹಳೆಗೇಟು, ಕ್ರೇನ್ ಚಾಲಕ ಗೋಪಾಲಕೃಷ್ಣ ಜಯನಗರ, ಲಾರಿ ಚಾಲಕ ಜಗದೀಶ್ ಶಾಂತಿ ಗ್ರಾಮ, ಹಾಸನ ಇವರನ್ನು ದಸ್ತಗಿರಿ ಮಾಡಲಾಗಿದೆ. ವಾಹನ ಮತ್ತು ಸೊತ್ತುಗಳ ಮೌಲ್ಯ 15 ಲಕ್ಷ ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಸೌಮ್ಯ. ಪಿ. ಎನ್, ರಾಘವೇಂದ್ರ ಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಶ್ರೀಮತಿ ಗೀತಾ, ಶ್ರೀಮತಿ ಪುಷ್ಪಾವತಿ, ನಿಂಗಪ್ಪ ಕೊಪ್ಪ, ವಾಹನ ಚಾಲಕ ಪುರುಷೋತ್ತಮ್ ಭಾಗವಹಿಸಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂಟೋನಿ ಎಸ್ ಮರಿಯಪ್ಪ ರವರ ನಿರ್ದೇಶನ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರವೀಣ್ ಕುಮಾರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿಮಂಜುನಾಥ ಎನ್. ರವರು ಮುಂದಿನ ತನಿಖೆ ಕೈಗೊಂಡಿದ್ದಾರೆ.