ಯೇನೆಕಲ್ಲು ಜಾತ್ರೋತ್ಸವ : ಎ. 1ರಂದು ಬಚ್ಚನಾಯಕ ನೇಮ

0

ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಶ್ರೀ ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ, ದೈವಸ್ಥಾನ ಯೇನೆಕಲ್ಲು ಇದರ ವಾರ್ಷಿಕ ಜಾತ್ರೋತ್ಸವವು ಮಾ. 24ರಿಂದ ಏ. 2ರ ತನಕ ವಿಜೃಂಭಣೆಯಿಂದ ಜರಗಲಿದ್ದು, ಎ. 1ರಂದು ಬಚ್ಚನಾಯಕ ದೈವದ ನೇಮೋತ್ಸವ ನಡೆಯಲಿದೆ.


ಶ್ರೀ ಶಂಖಪಾಲ‌ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಾ. 27ರಂದು ಸಂಜೆ ಭಜನೆ, ರಂಗಪೂಜೆ, ಶ್ರೀ ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಮಾ. 28ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.


ಶ್ರೀ ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ದೈವಸ್ಥಾನದಲ್ಲಿ ಮಾ. 29ರಂದು ಸಂಜೆ ಉಗ್ರಾಣ ತುಂಬಿಸುವುದು, ಮುಹೂರ್ತ ತೋರಣ, ಉಳ್ಳಾಕುಲು ವಗೈರೆ ದೈವಗಳು ನೇಮೋತ್ಸವ ನಡೆಯಿತು. ಮಾ. 30ರಂದು ರಾತ್ರಿ ಉಳ್ಳಾಳ್ತಿ ವಗೈರೆ ದೈವಗಳ ನೇಮೋತ್ಸವ

ನಡೆಯಿತು.

ಇಂದು ರಾತ್ರಿ ಭಂಡಾರ ಬಂದು ಉಡ್ಡೋತ್ತಾರು ಕುಮಾರ ದೈವಗಳ ನೇಮೋತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 6ರಿಂದ ಶ್ರೀ ಬಚ್ಚನಾಯಕ ದೈವ ನಂತರ ಕೋಟಿನಾಯಕ ದೈವದ ನೇಮೋತ್ಸವ ನಡೆಯಲಿದೆ. ರಾತ್ರಿ 8 ರಿಂದ ಪ್ರಧಾನಿ ವಗೈರೆ ನೇಮ, ಬಳಿಕ ಭಂಡಾರ ಹೊರಟು ಏ. 2ರಂದು ರಾತ್ರಿ 8ರಿಂದ ಗುಳಿಗ ದೈವದ ನೇಮೋತ್ಸವ ನಡೆಯಲಿದೆ. ಏ. 20ರಂದು ಮಧ್ಯಾಹ್ನ ಶ್ರೀ ದೇವರ ಪ್ರತಿಷ್ಠಾ ದಿವಸದ ಅಂಗವಾಗಿ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ, ರಾತ್ರಿ 7.30ರಿಂದ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ.