ಕಾಯರ್ತೋಡಿ: ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವವು ಎ.11 ಮತ್ತು 12ರಂದು ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮಾ.30ರಂದು ಸಂಜೆ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಡಿ.ಎಸ್. ಗಿರೀಶ್, ಮಾಜಿ ಅಧ್ಯಕ್ಷ ಕುಶಾಲಪ್ಪ ಡಿ‌.ಎಸ್., ಉತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಕುದ್ಕುಳಿ, ವಾಸುದೇವ ಕಾಯರ್ತೋಡಿ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.