ಎ.4ರಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ: ಸುಳ್ಯದಿಂದ 3 ಸಾವಿರ ಕಾರ್ಯಕರ್ತರು : ವೆಂಕಟ್ ವಳಲಂಬೆ

0

ಎ.8 ರಂದು ಆಲಂಕಾರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ : ಶಾಸಕಿ ಭಾಗೀರಥಿ ಮುರುಳ್ಯ

ಲೋಕಸಭಾ ಚುನಾವಣೆಗೆ ದ.ಕ. ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಎ.೪ರಂದು ನಾಮಪತ್ರ ಸಲ್ಲಿಸಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಿಂದ ೩ ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರೆ, ಎ.೮ರಂದು ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಕಡಬ ತಾಲೂಕಿನ ಆಲಂಕಾರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ ಆಯೋಜನೆಗೊಂಡಿದ್ದು ಎಲ್ಲ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಾಸಕಿ ಭಾಗೀರಥಿ ಮುರುಳು ಹೇಳಿದ್ದಾರೆ.


ಎ.೨ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ಮಾಹಿತಿ ನೀಡಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್‌ರವರು ತಮ್ಮ ಅವಧಿಯಲ್ಲಿ ಕೇಂದ್ರದಿಂದ ದೊಡ್ಡ ಅನುದಾನ ತಂದು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಮಾಡಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದೆ. ಮಾಣಿ - ಮೈಸೂರು ಚತುಷ್ಪಥ ರಸ್ತೆಗೆ ಮಾಸ್ಟರ್ ಪ್ಯ್ಲಾನ್ ತಯಾರಾಗಿದೆ. ಬಳ್ಪವನ್ನು ಆದರ್ಶ ಗ್ರಾಮವನ್ನಾಗಿ ತೆಗೆದುಕೊಂಡು ೮೦ ಕೋಟಿಗೂ ಅಧಿಕ ಅಭಿವೃದ್ಧಿಗಳು ಅಲ್ಲಿ ಆಗಿದೆ. ಹೀಗೆ ಕ್ಷೇತ್ರದ ೭೬ ಗ್ರಾಮದಲ್ಲಿಯೂ ಅನುದಾನ ಬಳಕೆ ಮಾಡಲಾಗಿದೆ ಎಂದವರು ಹೇಳಿದರು. ಎ.೪ರಂದು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು ೩ ಸಾವಿರ ಮಂದಿ ಕಾರ್ಯಕರ್ತರು ಸುಳ್ಯದಿಂದ ಭಾಗವಹಿಸಲಿದ್ದಾರೆಂದು . ಪ್ರಧಾನ ನರೇಂದ್ರಮೋದಿಯವರು ಕಳೆದ ೧೦ ವರ್ಷದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದರೊಂದಿಗೆ, ಸಮಾಜದ ಎಲ್ಲ ವರ್ಗಗಳಿಗೂ ಉಪಯೋಗವಾಗುವ ಯೋಜನೆ ತಂದಿದ್ದಾರೆ. ಆದ್ದರಿಂದ ಮತ್ತೊಮ್ಮೆ ಅವರು ಪ್ರಧಾನಿಯಾಗಿ ಬರಬೇಕೆಂದು ಎಲ್ಲರು ಆಶಿಸುತ್ತಾರೆ ಅವರು ಹೇಳಿದರು. ಎ.೮ ರಂದು ಮಹಿಳಾ ಸಮಾವೇಶ : ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ,ಎ.೮ರಂದು ಆಲಂಕಾರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ಯಶಸ್ವಿ ಗೊಳಿಸಲು ಎಲ್ಲ ಮಹಿಳೆಯವರು ಭಾಗವಹಿಸಬೇಕು ಎಂದು ಕೇಳಿಕೊಂಡರು.


ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಸುಳ್ಯ ಪ್ರಭಾರಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಚುನಾವಣಾ ಸುಳ್ಯ ಉಸ್ತುವಾರಿ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬಿಜೆಪಿ ಕೋಶಾಧಿಕಾರಿ ಸುಭೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಮಹಾಶಕ್ತಿಕೇಂದ್ರದ ಎ.ಟಿ.ಕುಸುಮಾಧರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಮ್ ಅಡ್ಪಂಗಾಯ, ನಿರ್ದೇಶಕ ಹೇಮಂತ್ ಕಂದಡ್ಕ, ನ.ಪಂ. ಸದಸ್ಯೆ ಶಶಿಕಲಾ ನೀರಬಿದಿರೆ, ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ಸದಸ್ಯ ಪ್ರಸಾದ್ ಕಾಟೂರು ಇದ್ದರು.