ಮುರುಳ್ಯ ಶಾಂತಿನಗರ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

0

ಸ.ಹಿ.ಪ್ರಾ. ಶಾಲೆ ಮುರುಳ್ಯ ಶಾಂತಿನಗರದಲ್ಲಿ ಮಕ್ಕಳ 4 ದಿನಗಳ ಬೇಸಿಗೆ ಶಿಬಿರ ಪ್ರಾರಂಭಗೊಂಡಿದೆ. ಎ. 3ರಿಂದ 6ರವರೆಗೆ ನಡೆಯುವ ಶಿಬಿರದಲ್ಲಿ ಚಿತ್ರಕಲೆ, ಪೇಪರ್ ಕ್ರಾಫ್ಟ್, ಮಣ್ಣಿನ ಆಕೃತಿ ರಚನೆ ಮುಂತಾದ ತರಬೇತಿಗಳನ್ನು ನೀಡಲಾಗುತ್ತಿದೆ.

ಕಾರ್ಯಕ್ರಮವನ್ನು ಶಾಲಾ ಎಸ್‌. ಡಿ.ಎಂ.ಸಿ. ಅಧ್ಯಕ್ಷ ದಿನೇಶ್ ನಡುಬೈಲು ದೀಪ ಬೆಳಗಿಸಿ ಉದ್ಘಾಟಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾ ಪ್ರಾಸ್ತಾವಿಕ ಮಾತುಗಳ ಮೂಲಕ ಶಿಬಿರದ ಮಾಹಿತಿಗಳನ್ನು ವಿವರಿಸಿದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಶ್ರೀಮತಿ ಬೇಬಿ ಮತ್ತು ಸದಸ್ಯರು ಹಾಗೂ ಶಿಬಿರದ ತರಬೇತಿ ಶಿಕ್ಷಕಿಯರು ಉಪಸ್ಥಿತರಿದ್ದರು.