ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ರವರಿಗೆ ಗೌರವಾರ್ಪಣೆ

0

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಅವರು ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕೆ.ಜೆ‌.ಯು. ಸುಳ್ಯ ತಾಲೂಕು ಘಟಕದ ವತಿಯಿಂದ ಎ.4ರಂದು ಮಂಗಳೂರಿನಲ್ಲಿ ಅವರಿಗೆ ಗೌರವಾರ್ಪಣೆ ಮಾಡಲಾಯಿತು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಸನ್ಮಾನಿಸಿ, ಗೌರವಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆ.ಜೆ.ಯು. ಜಿಲ್ಲಾ ಉಪಾಧ್ಯಕ್ಷ ಶರೀಫ್ ಜಟ್ಟಿಪಳ್ಳ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ನೀರಬಿದಿರೆ, ಸುಳ್ಯ ತಾಲೂಕು ಘಟಕದ ಕೋಶಾಧಿಕಾರಿ ವಿನಯ್ ಜಾಲ್ಸೂರು, ಸುಳ್ಯ ತಾಲೂಕು ಸಮಿತಿ ನಿರ್ದೇಶಕ ಕುಶಾಂತ್ ಕೊರತ್ಯಡ್ಕ ಉಪಸ್ಥಿತರಿದ್ದರು.