ಡಾ| ಭವ್ಯ ಶೇಖರ್‌ರವರಿಗೆ ದುಬೈ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್

0


ಕನ್ನಡ ಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವೇದಿಕೆಯಿಂದ ಪ್ರಶಸ್ತಿ

ಕನ್ನಡ ಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವೇದಿಕೆ ಕೊಡಮಾಡಲ್ಪಡುವ ದುಬೈ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ 2024 ಕ್ಕೆ ಡಾ| ಭವ್ಯ ಶೇಖರ್ ದಮ್ಮೂರ್ ಆಯ್ಕೆಯಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದ್ದು, ಮಾ. 28 ರಂದು ದುಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.


ಸಮಾರಂಭದಲ್ಲಿ ಸುಮಾರು 20 ಮಂದಿ ಸಾಧಕರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಬಳ್ಳಾರಿಯ ಬೃಂದಾ ಎಜ್ಯುಕೇಶನಲ್ ಇನ್‌ಸ್ಟಿಟ್ಯೂಷನ್‌ನ ಚೇರ್ಮೆನ್ ಆಗಿರುವ ಭವ್ಯ ಶೇಖರ್‌ರವರ ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಭವ್ಯರವರು ಮುಂಡೋಡಿಯ ದಿ. ಸದಾನಂದ ಗೌಡ ಮತ್ತು ಶ್ರೀಮತಿ ರವಿಕಲಾ ದಂಪತಿಯ ಪುತ್ರಿ. ರಾಜಕೀಯ ಮುಖಂಡರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶೇಖರ್ ದಮ್ಮೂರ್ ಇವರ ಪತಿ. ಪ್ರಶಸ್ತಿ ಪ್ರದಾನ ಸಮಾರಂಭದ ವರದಿ ಎ. 7 ರಂದು ಭಾನುವಾರ ಸಂಜೆ 4 ಗಂಟೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.