ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಳೆ ಸಮಾರಾಧನೆಗಾಗಿ ಪರ್ಜನ್ಯ ಜಪ ಹಾಗೂ ಸೀಯಾಳಾಭಿಷೇಕ

0

ಸುಳ್ಯಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಳೆ ಸಮಾರಾಧನೆಗಾಗಿ ಪರ್ಜನ್ಯ ಜಪ ಸೀಯಾಳಾಭಿಷೇಕ ಹಾಗೂ ಸಾಮೂಹಿಕ ಪ್ರಾರ್ಥನೆ ಹಾಗೂ ವಿಶೇಷ ಪೂಜೆಯು ದೇಗುಲದ ಪ್ರಧಾನ ಅರ್ಚಕ ಕೇಶವಮೂರ್ತಿ ಅವರ ನೇತೃತ್ವದಲ್ಲಿ ಎ.7ರಂದು ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿಯ ಸದಸ್ಯರುಗಳು, ದೇವಳದ ಸಿಬ್ಬಂದಿ ವರ್ಗದವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.