ಇಂದು, ನಾಳೆ: ಬೆಳ್ಳಾರೆ ಒತ್ತೆಕೋಲ

0

ಬೆಳ್ಳಾರೆಯ ಅಜಪಿಲ‌ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಏ. 7-8 ರಂದು ನಡೆಯಲಿದೆ.ಇಂದು ಸಂಜೆ ಭಂಡಾರ ತೆಗೆದು ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು.

ರಾತ್ರಿ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ‌ ಸಮಿತಿ ಬೆಳ್ಳಾರೆ ಇದರ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಚೀಮುಳ್ಳುರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ‌ ಕಾರ್ಯಕ್ರಮ ನಡೆಯಲಿದ್ದು, ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೂಂತಾರು ಧಾರ್ಮಿಕ ಉಪನ್ಯಾಸ ನೀಡಿದರು.

ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್. ರೈ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಸುಬ್ರಹ್ಮಣ್ಯ ಜೋಶಿ ಮತ್ತು ಪ್ರಗತಿಪರ ಕೃಷಿಕರಾದ ಶ್ಯಾಮ್ ಪ್ರಸಾದ್ ಕುರುಂಬುಡೇಲು ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಿತಿಯ ಗೌರವಾಧ್ಯಕ್ಷ ಆನಂದ ರೈ ಪುಡ್ಕಜೆ ಮತ್ತು ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಗೌಡ ಬೀಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾತ್ರಿ 8.30ರಿಂದ ಅನ್ನ ಸಂತರ್ಪಣೆ ನಡೆದು ರಾತ್ರಿ 10.00 ಗಂಟೆಯಿಂದ ಶ್ರೀ ಮಹಾವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಲಿದೆ. ಬಳಿಕ ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬೆಳ್ತಂಗಡಿ ಇವರಿಂದ ಯಕ್ಷಗಾನ ಬಯಲಾಟ ಅಜ್ಜನ ಪಜ್ಜೆ ನಡೆಯಲಿದೆ. ಏ. 8 ರಂದು ಪ್ರಾತಃಕಾಲ 5.00 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ ನಂತರ ಮಾರಿಕಳ ನಡೆದು ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಮುಳ್ಳು ಗುಳಿಗ ದೈವದ ಕೋಲ ನಡೆಯಲಿದೆ.