ಪೆರಾಜೆ : ಇಂದು ರಾತ್ರಿ ವಿಷ್ಣುಮೂರ್ತಿ ಕುಳ್ಚಾಟ, ನಾಳೆ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ

0

ಇಂದು ರಾತ್ರಿ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಭಂಡಾರ ತೆಗೆದು, ಬಳಿಕ ಕೂಡುವುದು, ಮೇಲೇರಿ ಅಗ್ನಿಸ್ಪರ್ಶ ಮತ್ತು ಕುಳ್ಚಾಟ ನಡೆಯಲಿದೆ. ನಾಳೆ ಬೆಳಿಗ್ಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆದು, ರುದ್ರಚಾಮುಂಡಿ ದೈವದ ಕೋಲ ನಡೆಯಲಿದೆ. ನಂತರ ಪ್ರಸಾದ ವಿತರಣೆ, ಮಾರಿಕಳದೊಂದಿಗೆ ಕಾಲಾವಧಿ ಜಾತ್ರೋತ್ಸವವು ಸಂಪನ್ನಗೊಳ್ಳಲಿದೆ.

ಜಾತ್ರೋತ್ಸವದ ಪ್ರಯುಕ್ತ ಕ್ರೀಡಾ ಕಾರ್ಯಕ್ರಮದ ಅಂಗವಾಗಿ ಇಂದು ರಾತ್ರಿ ದೇವಾಲಯದ ಮುಂಭಾಗದಲ್ಲಿ ಪೆರಾಜೆಯ ಯುವಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘದ ಪ್ರಾಯೋಜಕತ್ವದಲ್ಲಿ 32ನೇ ವರ್ಷದ ಹೊನಲು ಬೆಳಕಿನ ಸಾರ್ವಜನಿಕ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ ನಡೆಯಲಿದೆ.