ಮರ್ಕಂಜ ಗಣಿಗಾರಿಕೆ ನಿಲ್ಲಿಸುವಂತೆ ಊರವರ ಮನವಿಗೆ ಸ್ಫಂದನೆ

0

ಸ್ಥಳಕ್ಕೆ ಬಂದ ತಹಶೀಲ್ದಾರರು – ಗಣಿಗಾರಿಕೆ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ

ಸ್ಥಗಿತಗೊಂಡಿದ್ದ ಮರ್ಕಂಜದ ಅಳವುಪಾರೆ ಗಣಿಗಾರಿಕೆ ಕೆಲವು ದಿನದ ಹಿಂದೆ ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಿಗ್ಗೆ ಊರವರು ಸೇರಿ ಸುಳ್ಯ ತಹಶೀಲ್ದಾರರಿಗೆ ಮನವಿ ನೀಡಿ ಗಣಿಗಾರಿಕೆ ನಿಲ್ಲಿಸುವಂತೆ ತಿಳಿಸಿದ್ದರು. ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರಿಸುವ ಬಗ್ಗೆ ತಿಳಿಸಿದ್ದರು. ಇವರ ಮನವಿಗೆ ಸ್ಪಂಧಿಸಿದ ಸುಳ್ಯ ತಹಶೀಲ್ದಾರ್ ರವರು ನಿನ್ನೆಯೇ ಸಂಜೆ ಸ್ಥಳಕ್ಕೆ ಭೇಟಿ ‌ನೀಡಿದರು. ಆ ಸಂದರ್ಭವು ಸ್ಥಳೀಯರು ಜಮಾಯಿಸಿ ಗಣಿಗಾರಿಕೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಇದೀಗ ತಾತ್ಕಾಲಿಕವಾಗಿ ಗಣಿಗಾರಿಕೆ ನಿಲ್ಲಿಸುವಂತೆ ಗಣಿಗಾರಿಕೆ ನಡೆಸುವವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.