ಸುಳ್ಯ ರಾಘವೇಂದ್ರ ಮಠದಲ್ಲಿ ಶಿವಳ್ಳಿ ಸಂಪನ್ನ ವತಿಯಿಂದ ವಸಂತ ವೇದ ಶಿಬಿರ

0

ಸುಳ್ಯದ ಪಯಸ್ವಿನಿ ನದಿ ತಟದಲ್ಲಿರುವ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶಿವಳ್ಳಿ ಸಂಪನ್ನದ ವತಿಯಿಂದ ನಡೆಯುವ ವಸಂತ ವೇದ ಶಿಬಿರದ ಉದ್ಘಾಟನೆಯು ಇಂದು ನಡೆಯಿತು.
ರಾಘವೇಂದ್ರ ಮಠದ ತಂತ್ರಿವರ್ಯರಾದ ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ರವರು ದೀಪ ಬೆಳಗಿಸಿದರು.


ಮಠದ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಯವರು ಅಧ್ಯಕ್ಷತೆ ವಹಿಸಿದ್ದರು. ಶಿವಳ್ಳಿ ಸಂಪನ್ನದ ಅಧ್ಯಕ್ಷ ರಾಜಕುಮಾರ ಹೆಬ್ಬಾರ್, ಕಾರ್ಯದರ್ಶಿ ರಾಮಚಂದ್ರ ಸೋಮಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆದಿತ್ಯ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.