ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ

0

ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು
ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ.

ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಗ್ರೂಪ್‌ಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಅವಮಾನಕರ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ
ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದೆ.

ಸುಬ್ರಹ್ಮಣ್ಯದ ” ಶೈವಾಗಮ ಕ್ಷೇತ್ರ ಶ್ರೀಕುಕ್ಕೆ” ಹಾಗೂ “ಗೌಡ ನಮಿತಿ ಸುಬ್ರಹ್ಮಣ್ಯ ವಲಯ’ ಎಂಬ ಎರಡು ವಾಟ್ಸಪ್ ಗ್ರೂಪ್ ಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನಕಲಿ ಕಪೋಲಕಲ್ಪಿತ ಸುದ್ದಿಗಳನ್ನು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಂತೆ ಎಡಿಟ್ ಮಾಡಿ ಕೋಮುಗಲಭೆಗಳಿಗೆ ಪ್ರಚೋದನೆ ನೀಡುವಂತಹ ಉದ್ರೇಕಕಾರಿ ಯಾಗಿ ಬರೆಯಲಾಗಿದ್ದು ಹೀಗೆ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.