ಪೆರುವಾಜೆ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ,ಚಂಡಿಕಾ ಹೋಮ

0

108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ – ಶ್ರೀ ಸತ್ಯನಾರಾಯಣ ಪೂಜೆ

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಚಂಡಿಕಾ ಹೋಮ,108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಿತು.
ಎ.10 ರಂದು ರಾತ್ರಿ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ,ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ,ವಾಸ್ತು ಹೋಮ,ವಾಸ್ತು ಪೂಜಾ ಬಲಿ,ಮಹಾಪೂಜೆ,ಗಣಪತಿ ದೇವರಿಗೆ ಮೂಡಪ್ಪ ಸೇವೆ ಮತ್ತು ರಂಗಪೂಜೆ ,ಪ್ರಸಾದ ವಿತರಣೆ ನಡೆಯಿತು.
ಎ.11 ರಂದು 108 ತೆಂಗಿನಕಾಯಿ ಮಹಾಗಣಪತಿ ಹೋಮ,ಚಂಡಿಕಾಹೋಮ,ಶ್ರೀ ಸತ್ಯನಾರಾಯಣ ಪೂಜೆ,ಬಿಂಬ ಶುದ್ಧಿ, ಪಂಚವಿಂಶತಿ ಕಲಶ ಪೂಜೆ,ಬೆಳಿಗ್ಗೆ ಹೋಮದ ಪೂರ್ಣಾಹುತಿ,ಸುವಾಸಿನಿ ಪೂಜೆ ನಡೆಯಿತು.
ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತಾಭಿಷೇಕ,ಪಂಚವಿಂಶತಿ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ,ದೇವಸ್ಥಾನದ ಸಿಬ್ಬಂದಿ ವರ್ಗದವರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.