ಬೆಳ್ಳಾರೆ ಪೇಟೆಯಲ್ಲಿ ಕಾಂಗ್ರೆಸ್ ಬೃಹತ್ ಚುನಾವಣಾ ಪ್ರಚಾರ ಸಭೆ

0

ಲೋಕಸಭಾ ಚುನಾವಣಾ ಪ್ರಯುಕ್ತ ಎ.11 ರಾತ್ರಿ ಬೆಳ್ಳಾರೆಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆಯು ಅಚಲಾಪುರ ಕಟ್ಟೆ ಬಳಿ ನಡೆಯಿತು.
ಪ್ರಚಾರ ಸಮಿತಿ ಉಸ್ತುವಾರಿಯಾದ
ಬಿ.ರಮಾನಾಥ ರೈ ರವರು ಮತಯಾಚನೆ ಮಾಡಿದರು.


ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿದರು.ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ರವರನ್ನು ಗೆಲ್ಲಿಸುವಂತೆ ವಿನಂತಿಸಿದರು.
ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿಯವರು ಮತ ಯಾಚನೆ ಮಾಡಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮುಖಂಡರುಗಳಾದ ನಿತ್ಯಾನಂದ ಮುಂಡೋಡಿ, ಜಿ.ಕೃಷ್ಣಪ್ಪ, ಡಾ.ರಘು, ಎನ್.ಜಯಪ್ರಕಾಶ್ ರೈ, ವೆಂಕಪ್ಪ ಗೌಡ, ಶಾಹುಲ್ ಹಮೀದ್ ಕುತ್ತಮೊಟ್ಟೆ,
ರಾಜೀವಿ ಆರ್‌.ರೈ, ಅನಿಲ್ ರೈ,ವಿಠಲದಾಸ್,ಜಗನ್ನಾಥ ಪೂಜಾರಿ ಮುಕ್ಕೂರು,ಸಚಿನ್ ರಾಜ್ ಶೆಟ್ಟಿ,ಮುಸ್ತಾಫ,ಅಬ್ದುಲ್ ರಹಿಮಾನ್ ಹಾಗೂ ಪಕ್ಷದ ಕಾರ್ಯಕರ್ತರು , ಮತದಾರರು ಉಪಸ್ಥಿತರಿದ್ದರು.