ಸುಳ್ಯ ಜ್ಯೋತಿ ಸರ್ಕಲ್ ಬಳಿ ಬೈಕ್ ಸ್ಕಿಡ್ ಸವಾರರಿಗೆ ಗಾಯ

0

ಸುಳ್ಯ ಜ್ಯೋತಿ ಸರ್ಕಲ್ ಬಳಿ ಇಂದು ಮುಂಜಾನೆ ಸುಮಾರು ನಾಲ್ಕು ಗಂಟೆಗೆ ಬೈಕ್ ಸ್ಕಿಡ್ ಆಗಿ ಸವಾರರು ಇಬ್ಬರಿಗೆ ಗಾಯವಾಗಿರುವ ಘಟನೆ ತಿಳಿದು ಬಂದಿದೆ.

ಬೈಕ್ ಸವಾರರು ಮೈಸೂರು ಮೂಲದ ವಾಗಿದ್ದು ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದು ಘಟನೆಯಿಂದ ಸವಾರನ ಕಾಲಿಗೆ ಗಾಯವಾಗಿದೆ ಎನ್ನಲಾಗಿದೆ.

ಈ ಸಂದರ್ಭ ಸುಳ್ಯ ಆಸ್ಪತ್ರೆಗೆ ತೆರಳಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಮೈಸೂರಿಗೆ ತೆರಳಿರುತ್ತಾರೆ ಎನ್ನಲಾಗಿದೆ. ಘಟನೆಯಿಂದ ಬೈಕ್ ಸಂಪೂರ್ಣ ನಜ್ಜು ಗುಜ್ಜಾಗಿದೆ.