ಸುಳ್ಯ ಶ್ರೀ ರಾಮ ಮಂದಿರದಲ್ಲಿ ದೃಢ ಕಲಶಾಭಿಷೇಕ- ಸಾಮೂಹಿಕ ಪ್ರಾರ್ಥನೆ

0

ಸುಳ್ಯ ಶ್ರೀ ರಾಂಪೇಟೆಯ ಶ್ರೀ ರಾಮ ಭಜನಾ ಮಂದಿರದ ಬ್ರಹ್ಮಕಲಶೋತ್ಸವವು ಕಳೆದ ಫೆಬ್ರವರಿ ತಿಂಗಳಲ್ಲಿ ಜರುಗಿದ್ದು ಇದರ ಅಂಗವಾಗಿ ದೃಢ ಕಲಶಾಭೀಷೇಕವು
ಎ.14 ರಂದು ನಡೆಯಿತು.

ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ಮಧೂರು ರಾಜೇಶ್ ಸರಳಾಯ ರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನದೊಂದಿಗೆ ದೇವರಿಗೆ ದೃಢ ಕಲಶಾಭಿಷೇಕವಾಯಿತು.
ಮಧ್ಯಾಹ್ನ ಮಹಾಪೂಜೆಯಾಗಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯು ನಡೆಯಿತು. ಮಂದಿರದ ಅರ್ಚಕರು ಹಾಗೂ
ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಕೆ.ಉಪೇಂದ್ರ ಪ್ರಭು ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಆರ್ಥಿಕ ಸಮಿತಿ ಸಂಚಾಲಕ ಅಶೊಕ ಪ್ರಭು, ಧರ್ಮದರ್ಶಿ ಮಂಡಳಿಯ ಸದಸ್ಯರು ಹಾಗೂಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಉಪ ಸಮಿತಿ ಸಂಚಾಲಕರು ಮತ್ತು ಸದಸ್ಯರು ಮತ್ತು ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.