ಅಡ್ತಲೆ : ಅಂಬೇಡ್ಕರ್ ಜಯಂತಿ ಆಚರಣೆ

0

ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಗ್ರಾಮ ಘಟಕ ದ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ಸಂಘಟನೆಯ ಕಚೇರಿ ಶ್ರೀಹರಿ ಕಾಂಪ್ಲೆಕ್ಸ್ ಅಡ್ತಲೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹೊಸೋಳಿಕೆ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಶುಭಹಾರೈಸಿದರು.

ಅರಂತೋಡು ಗ್ರಾಮ ಘಟಕದ ಅಧ್ಯಕ್ಷ ನವೀನ ಕಲ್ಲುಗುಡ್ಡೆ ಅಂಬೇಡ್ಕರ್ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯಕ್ರಮವನ್ನು ತಾಲೂಕು ಘಟಕದ ಕಾರ್ಯದರ್ಶಿ ತೇಜಕುಮಾರ್ ಅರಮನೆಗಯ ನಿರೂಪಿಸಿ ವಂದಿಸಿದರು.