ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ವಿಶೇಷ ಶಿಬಿರ

0


ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರಸವಾ ಕೋಶ ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ?ಒಂದು ದಿನದ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಅಶ್ವಿನ್ ಕುಮಾರ್ ತರಬೇತುದಾರರು IRCS ರವರು ಆಗಮಿಸಿ ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಅವರಿಗೆ ನೇತ್ರಾವತಿ ಅವರು ಸಹಕರಿಸಿದರು, ಕಾರ್ಯಕ್ರಮದಲ್ಲಿ ಡಾ.ರಾಮಚಂದ್ರ ಸಹಸಂಚಾಲಕರು IQAC, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಕಾಂತರಾಜು ಸಿ ಮತ್ತು ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳಾದ ಮಂಜುನಾಥ ಸಿ ಉಪಸ್ಥಿತರಿದ್ದರು.

ದ್ವಿತೀಯ ಬಿಕಾಂ ವಿದ್ಯಾರ್ಥಿಗಳಾದ ವಿಶಾಖ ಎ ಕಾರ್ಯಕ್ರಮವನ್ನು ನಿರೂಪಿಸಿದರು, ಸಂಗೀತಾಪದ್ಮ ಸ್ವಾಗತಿಸಿದರು, ದ್ವಿತೀಯ ಬಿ.ಎ ವಿದ್ಯಾರ್ಥಿ ಮೌಲ್ಯ ವಂದಿಸಿದರು.