ಗಾಂಧಿನಗರ ಮಸೀದಿ ಎದುರು‌ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ : ಕಾರು ಜಖಂ

0

ಸುಳ್ಯದ‌ ಗಾಂಧಿನಗರ ಮಸೀದಿಯ ಮುಂಭಾಗ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿರುವುದಾಗಿ ವರದಿಯಾಗಿದೆ.

ಎ.16ರಂದು ಮುಂಜಾನೆ ಈ ಘಟನೆ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ‌ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು‌ ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ‌ ನಿಲ್ಲಿಸಿದ್ದರು.

ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತಿದ್ದ ಕಂಟೈನರ್ ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆಯಿತು. ಢಿಕ್ಕಿಯಾದ ರಭಸಕ್ಕೆ ಕಾರು ಒಂದು ಸುತ್ತು ತಿರುಗಿ ಮತ್ತೆ ಸುಳ್ಯದ‌ ಕಡೆ ಮುಖ ಮಾಡಿ ನಿಂತಿತು. ಈ ವೇಳೆ ಅಲ್ಲೆ ಇದ್ದ ಬೈಕ್ ಗೆ ಕಾರು ತಾಗಿತೆನ್ನಲಾಗಿದೆ.

ವಿಷಯ ತಿಳಿದು ಪೋಲೀಸರು ಸ್ಥಳಕ್ಕೆ ಬಂದರು. ಕಾರಿನ ಹಿಂಬದಿ ಸಂಪೂರ್ಣ ಜಖಂ ಗೊಂಡಿದೆ.