ಪಾದಾಚಾರಿಗೆ ಕಾರು ಡಿಕ್ಕಿ : ಜಟ್ಟಿಪಳ್ಳದ ಮೇಸ್ತ್ರಿ ಗೋಪಾಲ ಮೃತ್ಯು

0

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರಿಗೆ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.


ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದೆರೆನ್ನಲಾಗಿದೆ.


ಸ್ಥಳಕ್ಕೆ ಆಗಮಿಸಿದ ಪ್ರಗತಿ ಅಂಬ್ಯುಲೆನ್ಸ್ ಚಾಲಕ ಅಚ್ಚು ಅವರು ಸುಳ್ಯ ಸರಕಾರಿ ಆಸ್ಪತ್ರೆ ಸಾಗಿಸಿದರು.
ಗೋಪಾಲ ಅವರು ಜಟ್ಟಿಪಳ್ಳ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಮೇಸ್ತ್ರಿ ವೃತಿಯನ್ನು ಮಾಡುತ್ತಿದ್ದರು.