ಕನಕಮಜಲು: ಶ್ರೀ ಆತ್ಮಾರಾಮ ಭಜನಾ ಮಂದಿರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

0

ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪಕ್ಷದ ಮುಖಂಡರುಗಳಿಂದ ಸ್ವಾಗತ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಎ.17ರಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದು, ಬೆಳಿಗ್ಗೆ ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರಕ್ಕೆ ಭೇಟಿ ನೀಡಿದರು.
ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಸುಳ್ಯದ ಬಿಜೆಪಿ ಮುಖಂಡರುಗಳು ಸೇರಿ ಅವರನ್ನು ಸ್ವಾಗತಿಸಿ, ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಎಸ್.ಎನ್. ಮನ್ಮಥ, ವೆಂಕಟ್ ದಂಬೆಕೋಡಿ, ಸುಬೋದ್ ಶೆಟ್ಟಿ ಮೇನಾಲ, ಸಂತೋಷ್ ಜಾಕೆ, ಎ.ಟಿ. ಕುಸುಮಾಧರ, ದುರ್ಗೇಶ್ ಪಾರೆಪ್ಪಾಡಿ, ವಿನಯ ಮುಳುಗಾಡು, ಮಹೇಶ್ ಕುಮಾರ್ ಮೇನಾಲ, ಹೇಮಂತ್ ಮಠ, ಈಶ್ವರ ಕೊರ್ಬಂಡ್ಕ, ನಾರಾಯಣ ಗೌಡ ಬೊಮ್ಮೆಟ್ಟಿ, ಜಗನ್ನಾಥ ಮಾಣಿಮಜಲು, ಬಾಲಚಂದ್ರ ಮಾಣಿಮಜಲು, ರವಿಚಂದ್ರ ಕಾಪಿಲ, ಶ್ರೀಧರ ಕುತ್ಯಾಳ, ಅಶೋಕ ಅಡ್ಕಾರು, ಗಂಗಾಧರ ಕಾಳಮನೆ, ಎಅ. ಗೋಪಾಲಕೃಷ್ಣ ಭಟ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.