ಉಬರಡ್ಕ: ಮರಣ ಸಾಂತ್ವನ ಧನ ಸಹಾಯ ವಿತರಣೆ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿದ್ದು ಎ. 15 ರಂದು ನಿಧನರಾದ ಮಾಧವ ಗೌಡ ಕೋಲ್ಚಾರು ಇವರಿಗೆ ಮರಣ ಸಾಂತ್ವನ ನಿಧಿ ರೂ.9000/- ವನ್ನು ಮೃತರ ಪುತ್ರ ರಜನೀಶ್ ಮತ್ತು ಸುದರ್ಶನ್
ರವರಿಗೆ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ವಿತರಿಸಿ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಪಿ.ಎಸ್. ಗಂಗಾಧರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಉಪಸ್ಥಿತರಿದ್ದರು.