ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್. ಮಹಮ್ಮದ್ ರವರಿಗೆ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

0

ಕರ್ನಾಟಕ ಪ್ರದೇಶ KPCC ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಯಾಗಿ ನೇಮಕಗೊಂಡು ಪ್ರಪ್ರಥಮ ಬಾರಿಗೆ ಸುಳ್ಳಕ್ಕೆ ಆಗಮಿಸಿದ ಎಂ ಎಸ್ ಮಹಮ್ಮದ್ ರವರಿಗೆ ಸುಳ್ಯ ಪೈಚಾರಿನ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ವಾಗತಿಸಿ ಸನ್ಮಾನಿಸುವ ಕಾರ್ಯಕ್ರಮ ಫೆ17ರಂದು ಪೈಚಾರಿನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಆರ್.ಬಿ ಬಶೀರ್ ಮಾತನಾಡಿ ಹಲವಾರು ವರ್ಷಗಳಿಂದ ಎಮ್ ಎಸ್ ರವರು ರಾಜಕೀಯ ಸಾಮಾಜಿಕ ಧಾರ್ಮಿಕ ವಲಯದಲ್ಲಿ ಜನ ಸೇವೆ ಮಾಡುತ್ತ ಬಂದಿದ್ದಾರೆ ತನ್ನ ಸರಳ ಸಜ್ಜನ ನಡುವಳಿಕೆಯಿಂದ ಜನರ ಅಪಾರ ಬೆಂಬಲ ಮತ್ತು ಪ್ರೀತಿ ಯನ್ನು ಗಳಿಸಿದ್ದಾರೆ ಈ ಹಿನ್ನೆಲೆಯಲ್ಲಿ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಮುಜೀಬ್ ಪೈಚಾರ್, ಸುಳ್ಯ ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಅಡ್ವಕೇಟ್ ಪವಾಝ್ ಕನಕಮಜಲು, ರಶೀದ್ ಪೈಚಾರ್ ಮೊದಲಾದವರು ಉಪಸ್ಥಿತರಿದ್ದರು.