ನಾಳೆ( ಎ.19) ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆ

0

ಕಲ್ಲುಗುಂಡಿ, ತೊಡಿಕಾನ, ಗುತ್ತಿಗಾರು, ಸುಬ್ರಹ್ಮಣ್ಯ ಮೊದಲಾದ ಕಡೆಯೂ ಮತಯಾಚನೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ನಾಳೆ ಸುಳ್ಯ ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದು, ಬಳಿಕ ತಾಲೂಕಿನಾದ್ಯಂತ ಸಂಚರಿಸಿ ಮತಯಾಚನೆ ಮತ್ತು ಕಾರ್ನರ್ ಮೀಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ 8.30ಕ್ಕೆ ಸುಳ್ಯ ಹಳೆಗೇಟು ಪೆಟ್ರೋಲ್ ಪಂಪ್ ನಿಂದ ಗಾಂಧಿನಗರ ಪೆಟ್ರೋಲ್ ಪಂಪ್ ನವರಿಗೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.ಬಳಿಕ ಕಲ್ಲುಗುಂಡಿ ಪೇಟೆಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದಾರೆ. ಅಡ್ಯಡ್ಕದಲ್ಲಿ ಕಾರ್ನರ್ ಮೀಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಗುತ್ತಿಗಾರು ಪೇಟೆಯಲ್ಲಿ ಮತಯಾಚನೆ ನಡೆಸಲಿದ್ದಾರೆ.ಹರಿಹರ ಪಲ್ಲತಡ್ಕದಲ್ಲಿ ಕಾರ್ನರ್ ಮೀಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ .ಅಪರಾಹ್ನ 3.15ಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಮತಯಾಚನೆ ನಡೆಸಲಿದ್ದು, ದೇವಸ್ಥಾನಕ್ಕೆ ಭೇಟಿಯಾಗಿ ದೇವರ ದರ್ಶನ ಪಡೆಯಲಿದ್ದಾರೆ. ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಸ್ವಾಮೀಜಿಗಳನ್ನು ಭೇಟಿ ಮಾಡಲಿದ್ದಾರೆ ಬಳಿಕ ಕಡಬಕ್ಕೆ ತೆರಳಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.