ಕೆ.ಎಸ್.ಎಸ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ದಿನಾಚರಣೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾl ಬಿ. ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಹಾಗೂ ಗೀತ ನಮನ ಕಾರ್ಯಕ್ರಮ ವನ್ನು ಏ. 16ರಂದು ಹಮ್ಮಿಕೊಳ್ಳಲಾಯಿತು .

ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾಲೇಜಿನ ಕಾರ್ಯದರ್ಶಿಗಳಾದ ಡಾ. ನಿಂಗಯ್ಯ ಇವರು ಅಧ್ಯಕ್ಷತೆ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ, ಐ.ಕ್ಯು. ಎಸ್ .ಸಿ ಸಂಯೋಜಕರಾದ ಪ್ರೊ. ಲತಾ ಬಿ.ಟಿ ಹಾಗೂ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಸಂಯೋಜಕರಾದ ಡಾ. ದಿನೇಶ್ ಕೆ ಹಾಗೂ ಸಾಂಸ್ಕೃತಿಕ ತಂಡದ ನಿರ್ದೇಶಕರಾದ ವಿನ್ಯಾಸ ವಿನ್ಯಾಸ. ಹೆಚ್ ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರಿಗೆ ಪುಷ್ಪಾರ್ಚನೆ ಹಾಗೂ ಗೀತನಮನದ ಮೂಲಕ ಗೌರವವನ್ನು ಅರ್ಪಿಸಲಾಯಿತು.


ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಸದಸ್ಯರಾದ ಪುಷ್ಪ ಡಿ ಇವರು ನಿರೂಪಿಸಿ ಮಧುರ ಕೆ ಧನ್ಯವಾದ ಗೈದರು.