ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರೊಫೆಷನಲ್ ಕೋರ್ಸ್ ಗಳ ಬಗ್ಗೆ ಮಾಹಿತಿ ಕಾರ್ಯಗಾರ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐಕ್ಯುಎಸಿ ಯ ಜಂಟಿ ಆಶ್ರಯದಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಗಳ ಬಗ್ಗೆ ಮಾಹಿತಿ ಕಾರ್ಯಗಾರವು ಏ. 18ರಂದು ನಡೆಯಿತು.

ಮಂಗಳೂರಿನ ಕೆರಿಯರ್ ಗೈಡೆನ್ಸ್ ಹಾಗೂ ಮೋಟಿವೇಷನಲ್ ಸ್ಪೀಕರ್ ಗಳಾದ ವರ್ಷಿತ ಹಾಗೂ ಧೀರಜ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ. ಪಿ.ಟಿ., ಐ ಕ್ಯೂ ಎ ಸಿ ಕೋ-ಆರ್ಡಿನೇಟರ್ ಹಾಗೂ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗದ ಮುಖ್ಯಸ್ಥರಾದ ಪ್ರೊ. ಲತಾ ಬಿ.ಟಿ. ಉಪಸ್ಥಿತರಿದ್ದರು.

ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರುಗಳಾದ ಶ್ರೀಮತಿ ಮಧುರ ಕೆ ಹಾಗೂ ಶ್ರೀಮತಿ ಕೃತಿಕಾ ಪಿ ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು.