ಸುಣ್ಣಮೂಲೆ: ಬಾರೀ ಗಾಳಿಗೆ ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಮರ

0

ಸುಳ್ಯ -ಪುತ್ತೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಸ್ಥಳೀಯರಿಂದ ಮರ ತೆರವು ಕಾರ್ಯಾಚರಣೆ

ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಬಾರೀ ಗಾಳಿಗೆ ಬೃಹದಾಕಾರದ ದೂಪದ ಮರವೊಂದು ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ಸುಳ್ಯ -ಪುತ್ತೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಎ‌.19ರಂದು ರಾತ್ರಿ ಸಂಭವಿಸಿದೆ.

ಇದೀಗ ಸ್ಥಳೀಯರು ಸೇರಿ ಮರ ತೆರವು ಕಾರ್ಯದಲ್ಲಿ ತೊಡಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.