ಐವರ್ನಾಡು ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

0

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಮುಂಭಾಗದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.20 ಮತ್ತು ಎ.21 ರಂದು ಭಕ್ತಿ ,ಸಂಭ್ರಮದಿಂದ ನಡೆಯಿತು.
ಎ.20 ರಂದು ಸಂಜೆ ಕೈವಿದು, ರಾತ್ರಿ ಭಂಡಾರ ತೆಗೆಯಲಾಯಿತು, ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ನಡೆಯಿತು.
ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.


ರಾತ್ರಿ ಶ್ರೀ ದೈವದ ಕುಳ್ಚಾಟ ನಡೆಯಿತು.
ಕುಳ್ಚಾಟ ನಡೆದ ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ನಡೆಯಿತು.
ಎ.21 ರಂದು ಬೆಳಿಗ್ಗೆ ಶ್ರೀ ದೈವದ ಅಗ್ನಿಪ್ರವೇಶ ನಡೆಯಿತು.
ಈ ಸಂದರ್ಭದಲ್ಲಿ ಜ್ಯೋತ್ಸ್ನಾ ಪಾಲೆಪ್ಪಾಡಿ ಮತ್ತು ಕುಟುಂಬಸ್ಥರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.
ಬಳಿಕ ಪ್ರಸಾದ ವಿತರಣೆ, ಮಾರಿಕಳ ನಡೆಯಲಿದೆ.