ಚೆಂಬು : 20 ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

0

ಮಡಿಕೇರಿ ತಾಲೂಕು ಚೆಂಬು ಗ್ರಾಮದ ಊರುಬೈಲು ಮತ್ತು ಕುದುರೆಪಾಯ ಭಾಗದ ಸುಮಾರು 20 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಮತ್ತು ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಂಡರು.

ಇಂದು ಬಾಲಂಬಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರನ್ನು ಮಾಜಿ ವಿಧನಸಭಾದ್ಯಕ್ಷ ಕೆ.ಜಿ.ಬೋಪಯ್ಯ ಮತ್ತು ಬಿಜೆಪಿ ಜಿಲ್ಲಾದ್ಯಕ್ಷ ರವಿ ಕಾಳಪ್ಪರವರು ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.ಸಂದರ್ಭದಲ್ಲಿ ಮಂಡಲ ಅದ್ಯಕ್ಷ ನಾಗೇಶ್ ಕುಂದಲ್ಪಾಡಿ.ಶಕ್ತಿಕೇಂದ್ರ ಅದ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ. ಪಯಸ್ವಿನಿ ಸೊಸೈಟಿ ಅದ್ಯಕ್ಷ ಅನಂತ್ ಊರುಬೈಲು, ಪಂಚಾಯತ್ ಅದ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.