ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ವ್ಯತ್ಯಯ

0

ಮಡಿಕೇರಿ ಮೈಸೂರು ಕಡೆಯ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ

ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆಎಸ್ಆರ್ಟಿಸಿ ಬಸ್ ಸಂಚಾರ ವ್ಯತ್ಯಯಿಂದ ಇಂದು ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ತಮ್ಮ ತಮ್ಮ ಊರುಗಳಿಗೆ ಮತದಾನಕ್ಕೆ ತೆರಳುವ ನಿಟ್ಟಿನಲ್ಲಿ ಬಸ್ಸಿಗಾಗಿ ಪ್ರಯಾಣಿಕರು ಕಾಯುತ್ತಿರುವ ದೃಶ್ಯ ಕಂಡು ಬರುತ್ತಿದೆ.

ಗ್ರಾಮೀಣ ಭಾಗದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದರು ಎಂದಿನಂತೆ ಏಳು ರೂಟುಗಳನ್ನು ಕಡಿಮೆಗೊಳಿಸಲಾಗಿದೆ ಎಂದು ಸಂಬಂಧಪಟ್ಟವರು ಮಾಹಿತಿ ನೀಡಿದ್ದಾರೆ.

ಮಡಿಕೇರಿ ಮೈಸೂರು ಭಾಗಕ್ಕೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದೆ.

ಈ ಕಾರಣದಿಂದ ಆ ಭಾಗಕ್ಕೆ ತೆರಳುವ ಪ್ರಯಾಣಿಕರು ಬಸ್ಸಿಗಾಗಿ ಬಹಳಷ್ಟು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.