ಮೇ.5: ಪಂಜದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ

0

ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್, ಸುಳ್ಯ ತಾಲೂಕು, ಪಂಜ ಮತ್ತು ನಿಂತಿಕಲ್ಲು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 15ನೇ ವರ್ಷದ ಭಜನಾ ತರಬೇತಿ ಶಿಬಿರ ಉದ್ಘಾಟನೆ ಮೇ.5 ರಂದು ಹಾಗೂ ಮೇ.10 ರಂದು ಅರ್ಧ ಏಕಾಹ ಭಜನೆ ಕಾರ್ಯಕ್ರಮ ,ಶ್ರೀ ಸತ್ಯನಾರಾಯಣ ದೇವರ ಪೂಜೆ ಜರುಗಲಿದೆ.

ಮೇ 5 ರಂದು ಪಾಲ್ತಿಮಾರ್ ಶ್ರೀ ಮೂಕಾಂಬಿಕ ಕ್ಷೇತ್ರದ ಪಂಡಿತ್ ಶ್ರೀ ಕೇಶವ ಜ್ಯೋತಿಷ್ಯರು ಭಜನಾ ತರಬೇತಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಶಾರದಾಂಬ ಭಜನಾ ಮಂಡಳಿ ಉಪಾಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ ಸಭಾಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೇ.11ರಂದು ಭಜನಾ ತರಬೇತಿ ಸಮಾರೋಪ ಸಮಾರಂಭ ನಡೆಯಲಿದೆ. 11 ವರ್ಷ ಮೇಲ್ಪಟ್ಟು ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಭಜನಾ ತರಬೇತಿ ನಡೆಸಲಾಗುವುದು. ಹೆಸರು ನೋಂದಾಯಿಸಲು 8105439294, 9686914771, 9480594136, 9483 9225 19 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.