ಸುಬ್ರಹ್ಮಣ್ಯ : ದ್ವಿತೀಯ ಪಿ.ಯು ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

0

ದ್ವಿತೀಯ ಪಿ.ಯು ನಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿನಿ ದುರ್ಗಾಲಕ್ಷ್ಮೀ ಜಿ.ಸಿ ಅವರನ್ನು ಕಾಲೇಜು ವತಿಯಿಂದ ಎ.29 ರಂದು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ದುರ್ಗಾ ಲಕ್ಷ್ಮೀ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದುರ್ಗಾಲಕ್ಷ್ಮೀ ಅವರ ತಾಯಿ ಸುಶೀಲ.ಜಿ, ಸಹೋದರ ಕಾಲೇಜಿನ ಹಿರಿಯ ವಿದ್ಯಾರ್ಥಿ ಶಿವಪ್ರಸಾದ್ ಜಿ.ಸಿ, ಆಯ್ಕೆ ಶ್ರೇಣಿ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್.ಬಿ.ಎನ್, ಕಾರ್ಯದರ್ಶಿ ರತ್ನಾಕರ.ಎಸ್, ಉಪನ್ಯಾಸಕರಾದ ಜಯಶ್ರೀ.ವಿ.ದಂಬೆಕೋಡಿ, ಜ್ಯೋತಿ.ಪಿ.ರೈ, ಭವ್ಯಶ್ರೀ ಹರೀಶ್ ಕುಲ್ಕುಂದ, ಸುಧಾ, ಸವಿತಾ ಕೈಲಾಸ್, ಶ್ರೀಧರ್ ಪುತ್ರನ್, ಮನೋಜ್ ಕುಮಾರ್ ಬಿ.ಎಸ್, ಸಿಬ್ಬಂದಿಗಳಾದ ಸುನೀತಾ ಕುಲ್ಕುಂದ, ಕೇಶವ ಆರ್ಯ ಪೆರುವಾಜೆ ಉಪಸ್ಥಿತರಿದ್ದರು.