ಬೆಳ್ಳಾರೆ ಶ್ರೀ ಸದಾಶಿವ ಶಿಶು ಮಂದಿರದಲ್ಲಿ ಚಿಣ್ಣರ ಹಬ್ಬ

0

ಶ್ರೀ ಸದಾಶಿವ ಚಾರಿಟಬಲ್ ಸೊಸೈಟಿ ಬೆಳ್ಳಾರೆ ಇದರ ಆಶ್ರಯದಲ್ಲಿರು ಶ್ರೀ ಸದಾಶಿವ ಶಿಶು ಮಂದಿರದ 15ನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬ-2024 ಎ. 29ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.


ಸಂಜೆ ಶ್ರೀ ಸದಾಶಿವ ಚಾರಿಟಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ದೀಪ ಪ್ರಜ್ವಲನೆ ಮಾಡಿದರು. ಬಳಿಕ ಸಂಸ್ಥೆಯ ಪುಟಾಣಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ, ಮಾತೃಮಂಡಳಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಸದಾಶಿವ ಚಾರಿಟಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ರಾಮಪ್ರಸಾದ ಕಾಂಚೋಡು ಮತ್ತು ಸುಭಾಶ್ಚಂದ್ರ ಕಳಂಜ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ

ಮಾತಾಜಿ ತೇಜೇಶ್ವರಿ ಸಂಸ್ಥೆಯ ವರದಿ ವಾಚಿಸಿದರು. ಕು. ತನ್ವಿ ಅರ್ನಾಡಿ ಪ್ರಾರ್ಥಿಸಿದರು. ಸುಬ್ರಹ್ಮಣ್ಯ ಜೋಶಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಸೊಸೈಟಿಯ ಕಾರ್ಯದರ್ಶಿ ಶ್ರೀರಾಮ ಪಾಟಾಜೆ ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು. ಶಿಶುಮಂದಿರದ ಪುಟಾಣಿಗಳಿಗೆ

ಪ್ರಮಾಣಪತ್ರ ಮತ್ತು ಸ್ಮರಣಿಕೆಯನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಶ್ರೀಮತಿ ಯಕ್ಷಿತಾ ಪುಟಾಣಿಗಳ ಹೆಸರು ವಾಚಿಸಿದರು.