ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗರ್ಭಗುಡಿಯ ನಿರ್ಮಾಣದ ಕಾರ್ಯ ಪ್ರಗತಿ

0

ನಿರ್ಮಾಣ ಹಂತದಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಿಯ ಗರ್ಭಗುಡಿಯ ನಿರ್ಮಾಣ ಕಾರ್ಯ ಪೂರ್ಣಹಂತಕ್ಕೆ ತಲುಪಿದ್ದು, ಬಾಕಿ ಕಾರ್ಯಗಳು ಶೀಘ್ರವಾಗಿ ನಡೆಯಬೇಕಿದೆ.
ಗರ್ಭಗುಡಿಯ ಮುಂಭಾಗದ ತೀರ್ಥ ಮಂಟಪದ ಫೌಂಡೇಶನ್ ಕಾರ್ಯವೂ ಪೂರ್ಣಗೊಂಡಿದೆ. ಈ ಬಗ್ಗೆ ಸುದ್ದಿಯೊಂದಿಗೆ ಮಾತನಾಡಿದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪುರವರು ದೇವಸ್ಥಾನ ನಿರ್ಮಾಣ ಕಾರ್ಯವು ವೇಗವಾಗಿ ನಡೆಯುತ್ತಿದ್ದು, ಪೂರ್ಣಗೊಳ್ಳಬೇಕಾದರೆ ಆರ್ಥಿಕ ಕ್ರೋಢೀಕರಣದ ಅಗತ್ಯವಿದೆ. ಸಹೃದಯಿ ಭಕ್ತಾದಿಗಳು ತಮ್ಮ ಭಕ್ತ್ಯಾನುಸಾರ ದೇಣಿಗೆ ನೀಡಿ ಆದಷ್ಟು ಶೀಘ್ರದಲ್ಲಿ ದೇವಸ್ಥಾನ ಎದ್ದುನಿಲ್ಲಲು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಪ್ರಸ್ತುತ ಪ್ರತೀ ಶುಕ್ರವಾರ ಮತ್ತು ಹುಣ್ಣಿಮೆಯ ದಿನ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯುತ್ತಿದೆ.