ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ  

0

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ  ಶ್ರೀಮತಿ ಮಹಾಲಕ್ಷ್ಮಿ ಕೆ ಎಲ್ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು 06 ರಂದು ಶ್ರೀಮತಿ ಮಹಾಲಕ್ಷ್ಮಿ ಕೆ ಎಲ್ ಅವರ ಪುತ್ರ ಸೋಮನಾಥ ಕೆ ಎಲ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಶಾಖೆಯ ಪ್ರಬಂಧಕರಾದ ವಿನೋದ್ ಕುಮಾರ್ ಎ, ಸಂತೋಷ್ ಪಿ, ಸೀನಿಯರ್ ಮ್ಯಾನೇಜರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.