ಉಪೇಂದ್ರ ಕಾಮತ್ ನಿಧನ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂತಾಪ

0

ಬಿಜೆಪಿ ಹಿರಿಯ ಮುಖಂಡ ಹಾಗೂ ಹಿರಿಯ ಉದ್ಯಮಿಯಾಗಿದ್ದ ಜಾಲ್ಸೂರು ಗ್ರಾಮದ ವಿನೋಬನಗರದ ಉಪೇಂದ್ರ ಕಾಮತ್ ಅವರು ನಿಧನರಾದ ಹಿನ್ನೆಲೆಯಲ್ಲಿ ದ‌.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಜನಸಂಘದ ಕಾಲದಿಂದಲೂ ಹಿಂದೂ ಸಮಾಜದ ಅಭ್ಯುದಯಕ್ಕೆ ದುಡಿದು, ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಕರಸೇವಕರಾಗಿ ದುಡಿದು, ಸಂಘಪರಿವಾರ ಹಾಗೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಉಪೇಂದ್ರ ಕಾಮತ್ ಅವರು ಪಕ್ಷ ಮತ್ತು ಸಂಘಟನೆಗೆ ಸಲ್ಲಿಸಿದ ಕೊಡುಗೆ ಅಪಾರ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟರು ಉಪೇಂದ್ರ ಕಾಮತ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.