ಮೇ.10 :(ಇಂದು) ಪಂಜದಲ್ಲಿ ಅರ್ಧ ಏಕಾಹ ಭಜನೆ ,ಶ್ರೀ ಸತ್ಯನಾರಾಯಣ ದೇವರ ಪೂಜೆ

0

ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್, ಸುಳ್ಯ ತಾಲೂಕು, ಪಂಜ ಮತ್ತು ನಿಂತಿಕಲ್ಲು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 15ನೇ ವರ್ಷದ ಭಜನಾ ತರಬೇತಿ ಶಿಬಿರ ಮೇ.5 ರಿಂದ ಆರಂಭ ಗೊಂಡಿದೆ.

ಆ ಪ್ರಯುಕ್ತ ಮೇ.10 ರಂದು ಸಂಜೆ 6 ರಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಅರ್ಧ ಏಕಾಹ ಭಜನೆ ಕಾರ್ಯಕ್ರಮ ಸಂಜೆ ಗಂಟೆ 6.37 ರಿಂದ ಮೇ.11 ಮುಂಜಾನೆ ಗಂಟೆ 6.30 ತನಕ ಜರುಗಲಿದೆ.

ಮೇ.11ರಂದು ಸಂಜೆ ಗಂಟೆ 3ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಶ್ರೀ ಕ್ಷೇತ್ರ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರು ಆಶೀರ್ವಚನ ನೀಡಲಿದ್ದಾರೆ. ಭಜನೋತ್ಸವ ಸಮಿತಿ ಅಧ್ಯಕ್ಷ ರಾಜ ಕುಮಾರ್ ಬೇರ್ಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಭಜನಾ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.