ವಸಂತ ಬಂಗೇರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಂತಾಪ ಸೂಚಕ ಸಭೆ

0

ದ.ಕ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಕಾರ್ಯಕ್ರಮ ಮೇ.9 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ನುಡಿ ನಮನ ಸಲ್ಲಿಸಿ ಮಾತನಾಡಿ ರಾಜ್ಯ ಕಂಡ ಅಭೂತಪೂರ್ವ ರಾಜಕಾರಣಿಯಾದ ವಸಂತ ಬಂಗೇರರು ಬಡವರ ಕೆಲಸ ಕಾರ್ಯಗಳಿಗೆ ಅಧಿಕಾರಿಗಳು ಸ್ಪಂದಿಸದೆ ಇದ್ದಾಗ ಛಲದಿಂದ ಮಾಡಿಸುತ್ತಿದ್ದರು. ಜನೋಪಯೋಗಿ ಕೆಲಸಗಳಲ್ಲಿ ಬಂಗೇರರು ಸದಾ ಮುಂದು. ಜಾತ್ಯತೀತ ನಾಯಕ, ಲಂಚ ಭ್ರಷ್ಟಾಚಾರಿಗಳಿಗೆ ಸಿಂಹ ಸ್ವಪ್ನರಾಗಿದ್ದರು ಅವರ ಅಗಲುವಿಕೆ ಜಾತ್ಯತೀತ ತತ್ವಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ.

ಕೆಪಿಸಿಸಿ ಕಾರ್ಯದರ್ಶಿ ಎಂಬ ನೆಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಅವರ ಒಡನಾಟ, ಪೊಲೀಸ್ ಠಾಣೆ ಯೊಳಗೆ ನಡೆಸಿದ ಧರಣಿ ಕಾರ್ಯಕರ್ತರಿಗೆ ಅನ್ಯಾಯ ಆದಾಗ ಪ್ರತಿಭಟಿಸುವ ರೀತಿ, ಅಧಿಕಾರಿಗಳನ್ನು ಹತೋಟಿಯಲ್ಲಿಟ್ಟ ರೀತಿ ಅವಿಸ್ಮರಣೀಯ” ಎಂದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ಮಾತನಾಡಿ, ಬಂಗೇರರು ನೊಂದವರ ಪಾಲಿಗೆ ದ್ವನಿಯಾಗಿದ್ದರು. ನಾವು ಓರ್ವ ಉತ್ತಮ ನಾಯಕನನ್ನು ಕಳೆದುಕೊಂಡಿದ್ದೇವೆ.ಎಂದರು .

ಸಭೆಯಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್ ಮಾತನಾಡಿ ಅವರ ನಿಧನ ಪಕ್ಷಕ್ಕೆ ರಾಜ್ಯಕ್ಕೆ ದೊಡ್ಡ ನಷ್ಟ ಎಂದರು. ಗೋಕುಲದಾಸ್ ಅವರು 46 ವರ್ಷಗಳ ಹಿಂದೆ ವಸಂತ್ ಬಂಗೇರ ಮಾಡಿದ ಸಹಾಯವನ್ನು ಸ್ಮರಿಸಿದರು ದಿನೇಶ್ಅಂಬೇಕಲ್ಲು , ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್, ನಗರ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಭಟ್ ಮತ್ತು ಧೀರ ಕ್ರಾಸ್ತಾ, ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ ಸಿದ್ಧೀಕ್ ಕೊಕ್ಕೊ, ರಾಜು ಪಂಡಿತ್, ಎನ್ ಎಸ್ ಯು ಐ ಅಧ್ಯಕ್ಷರಾದ ಧನುಷ್ ಕುಕ್ಕೆಟ್ಟಿ ಮೊದಲಾದವರಿದ್ದರು.