ಬೆಳ್ಳಾರೆ ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನದ ನಾಗಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ನಿರ್ಮಾಣ ಹಂತದಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ನಾಗಸಾನಿಧ್ಯದಲ್ಲಿ 2ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 27ರಂದು ಕ್ಷೇತ್ರದ ತಂತ್ರಿಗಳಾದ ಕುನ್ನತ್ತಿಲ್ ಬ್ರಹ್ಮಶ್ರೀ ಮುರಳಿಕೃಷ್ಣ ನಂಬೂದರಿಯವರ ನೇತೃತ್ವದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ನಾಗಬ್ರಹ್ಮ, ನಾಗರಾಜ, ನಾಗಕನ್ನಿಕೆಯರ ಚಿತ್ರಕೂಟ ಸಹಿತ ನಾಗದೇವರಿಗೆ ಹಾಲು, ಸಿಯಾಳ, ಅಭಿಷೇಕ ಮತ್ತು ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಆಶ್ಲೇಷ ಬಲಿ ಪೂಜೆ, ಪ್ರಸಾದ ವಿತರಣೆ ನಂತರ ಶ್ರೀ ರಾಜರಾಜೇಶ್ವರಿ ದೇವಿಗೆ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಲಿದೆ. ಕು. ತನುಶ ಪಡ್ಪು ಹಾಡಿರುವ ಶ್ರೀ ಕ್ಷೇತ್ರದ ದೇವಿಯ ಮಹಿಮೆಯನ್ನೊಳಗೊಂಡ ಶ್ರೀಚಕ್ರರೂಪಿಣಿ ಎಂಬ ಭಕ್ತಿಗೀತೆಯ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ನಡೆಯಲಿದೆ. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಮುರಳಿಕೃಷ್ಣ ನಂಬೂದರಿಯವರು ಧ್ವನಿಸುರುಳಿ ಬಿಡುಗಡೆ ಮಾಡಲಿದ್ದಾರೆ.


ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗ ದೇವರ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ನಾಗದೇವರು, ಶ್ರೀ ರಾಜರಾಜೇಶ್ವರಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ, ಪಂಜಿಗಾರು ಮತ್ತು ಎರಡೂ ಸಮಿತಿಗಳ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.