ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ವೇದಮೂರ್ತಿ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು.
ಶಿಕ್ಷಣ
ತಜ್ಞರು ಮತ್ತು ಸಾಹಿತಿಗಳಾದ ಪ್ರೊ. ಕೆ. ಇ. ರಾಧಾಕೃಷ್ಣ ಶಿಲಾನ್ಯಾಸ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನ ಸಭೆಯ ಮಾಜಿ ಸಭಾಧ್ಯಕ್ಷ ಕೆ. ಜಿ. ಬೋಪಯ್ಯ, ಸುಳ್ಯ ಭಾರತ್ ಆಗ್ರೋ ಸಂಸ್ಥೆಯ ಮಾಲಕ ರೊ. ರಾಮಚಂದ್ರ ಪಿ., ಶಿಲ್ಪ ಶಾಸ್ತ್ರಜ್ಞರಾದ ರಮೇಶ್ ಕಾರಂತ ಬೆದ್ರಡ್ಕ ಉಪಸ್ಥಿತರಿದ್ದರು.
ಆಡಳಿತ ಮೊಕ್ತಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ದೇವತಕ್ಕರಾದ ರಾಜಗೋಪಾಲ ರಾಮಕಜೆ, ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ, ಪೆರಾಜೆ ಜ್ಯೋತಿ ಪ್ರೌಢಶಾಲೆಯ ಸಂಚಾಲಕ ಎನ್.ಎ.ಜ್ಞಾನೇಶ್, ಸಂಪಾಜೆ ಪಯಸ್ವಿನಿ ಸೊಸೈಟಿ ಅಧ್ಯಕ್ಷ ಎನ್.ಸಿ.ಅನಂತ, ತಕ್ಕ ಮುಖ್ಯಸ್ಥರು, ಸಮಿತಿ ಸದಸ್ಯರುಗಳು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.