ಜೂ. 10-12: ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಗಾರ

0

ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಗಾರ ಜೂಮ 10ರಿಂದ 12ರ ತನಕ ನ್ಯಾಶನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಇದರ ಸಹಯೋಗದೊಂದಿಗೆ ಜರಗಲಿದೆ. ಜೂ.10ರಂದು ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಒ.ಎಲ್.ಇ. ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ‌ ಎ.ಒ.ಎಲ್.ಇ ಸುಳ್ಯ ಇದರ ಕಾರ್ಯದರ್ಶಿ ಹಾಗೂ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್‌ಸ್ ಇದರ ಸೆನೆಟ್ ಸದಸ್ಯೆ ಡಾ. ಐಶ್ವರ್ಯ ಕೆ.ಸಿ ಮತ್ತು ಶ್ರೀ ಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಇದರ ಪಂಚ ಕರ್ಮ ವಿಭಾಗದ ಮುಖ್ಯಸ್ಥರು ಹಾಗೂ ರಾಜೀವ್ ಗಾಂದಿ‌ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್‌ಸ್ ಬೆಂಗಳೂರು ಇದರ ಬೋರ್ಡ್ ಆಫ್ ಸ್ಟಡೀಸ್ ಆಯುರ್ವೇದ ವಿಭಾಗದ ಚೆಯರ್ ಮೆನ್‌ ಡಾ. ಗಣೇಶ್ ಪುತ್ತೂರು ಭಾಗವಹಿಸಲಿದ್ದಾರೆ.


ಮೂರು ದಿನದ ಕಾರ್ಯಗಾರದಲ್ಲಿ ದೇಶದ ವಿವಿಧ ಆಯುಷ್ ಕಾಲೇಜುಗಳ ಹತ್ತು ತರಬೇತುದಾರರು ಸ್ನಾತಕೋತ್ತರ ಪದವಿ ಮಾರ್ಗದರ್ಶಕರಿಗೆ ಸೈಂನ್‌ಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್ನ ಕುರಿತು ತರಬೇತಿಯನ್ನು ನೀಡಲಿದ್ದಾರೆ. ಜೂ. 12 ರಂದು ಕಾರ್ಯಗಾರದ ಸಮಾರೋಪ ಸಮಾರಂಭ ಜರಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಒ.ಎಲ್.ಇ. ಅಧ್ಯಕ್ಷ ಡಾ. ಕೆ ವಿ ಚಿದಾನಂದ ವಹಿಸಲಿದ್ದಾರೆ. ಅಥಿತಿಗಳಾಗಿ ಎ.ಒ.ಎಲ್.ಇ.
ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಎ.ಒ.ಎಲ್.ಇ. ಕಾರ್ಯದರ್ಶಿ ಹಾಗೂ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್‌ಸ್ ಇದರ ಸೆನೆಟ್ ಸದಸ್ಯೆ ಡಾ. ಐಶ್ವರ್ಯ ಕೆ.ಸಿ. ಮತ್ತು ಕೆ. ವಿ. ಜಿ. ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕರಾದ ಡಾ. ಸಿ ರಾಮಚಂದ್ರ ಭಟ್


ಭಾಗವಹಿಸಲಿದ್ದಾರೆ ಎಂದು ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.