ಅರೆಭಾಷೆ ಅಕಾಡೆಮಿ ನೂತನ ಅಧ್ಯಕ್ಷ ಸದಾನಂದ ಮಾವಜಿ ಇವರಿಂದ ಮಡಿಕೇರಿ ಶಾಸಕ ಮಂಥರ್ ಗೌಡ ಭೇಟಿ

0

ಜೂ.13ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಇವರು ಮಡಿಕೇರಿ ಶಾಸಕರಾದ ಮಂಥರ್ ಗೌಡ ಇವರನ್ನು ಭೇಟಿ ಮಾಡಿ ಅರೆಭಾಷೆ ಅಕಾಡೆಮಿಯ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು. ಶಾಸಕರು ಅಕಾಡೆಮಿ ಕೆಲಸಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ನೂತನ ಕರ್ನಾಟಕ ಸಮುಚ್ಚಯ ಭವನ ಶೀಘ್ರದಲ್ಲಿ ಪೂರ್ಣಗೊಳಿಸಬೇಕಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಯವರಲ್ಲಿ ನೂತನ ಅಧ್ಯಕ್ಷರು ಮನವಿ ಮಾಡಿದರು. ಇದರ ಜೊತೆಗೆ ಕೊಡಗು ಜಿಲ್ಲಾ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಅಕಾಡೆಮಿ ಸದಸ್ಯ ಚಂದ್ರಶೇಖರ ಪೇರಾಲು, ಅರೆಭಾಷೆ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಉಪಸ್ಥಿತರಿದ್ದರು.