ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಅಧಿಕಾರ ಸ್ವೀಕಾರ

0

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿಯವರು ಮಡಿಕೇರಿಯ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಅಕಾಡೆಮಿ ರಿಜಿಸ್ಟರ್ ಚಿನ್ನಸ್ವಾಮಿ ಇವರು ನೂತನ ಅಧ್ಯಕ್ಷರನ್ನು ಸ್ವಾಗತಿಸಿದರು. ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು, ಕಚೇರಿ ಸಿಬ್ಬಂದಿಗಳಾದ ಶ್ರೀಮತಿ ಜ್ಯೋತಿ ಮತ್ತು ಶೋಭಾ ಉಪಸ್ಥಿತರಿದ್ದರು.

ಅಧಿಕಾರ ಸ್ವೀಕಾರದ ಬಳಿಕ ಸುದ್ದಿಯೊಂದಿಗೆ ಮಾತನಾಡಿದ ಸದಾನಂದ ಮಾವಜಿಯವರು “ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ, ಬೆಳೆಸಲು ಆದ್ಯತೆಯನ್ನು ನೀಡುತ್ತೇವೆ. ಈ ಹಿಂದಿನ ಸಮಿತಿಯವರು ಮಾಡಿದ ಉತ್ತಮ ಕೆಲಸಗಳನ್ನು ಇಟ್ಟುಕೊಂಡು ಹೊಸ ಯೋಜನೆಯನ್ನು ಹಾಕಿಕೊಂಡು, ಎಲ್ಲರ ಸಹಕಾರ, ಸಲಹೆ ಪಡೆದು ಮುಂದುವರಿಯುತ್ತೇವೆ. ನಮ್ಮ ಅವಧಿಯಲ್ಲಿ ಎಲ್ಲ ಕಡೆಯೂ ಕಾರ್ಯಕ್ರಮ ಸಂಘಟಿಸುತ್ತೇವೆ ಎಂದು ತಿಳಿಸಿದರು.