ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

0

ಬೆಳ್ಳಾರೆ ಪೊಲೀಸ್ ಠಾಣೆಯಲ್ಕಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯು ಜೂ.13 ರಂದು ನಡೆಯಿತು.
ಪೊಲೀಸ್ ಠಾಣೆಯ ಎಸ್.ಐ.ಸಂತೋಷ್ ಬಿ.ಪಿಯವರು ಮಾತನಾಡಿ ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ,ಸೌಹಾರ್ದತೆಯಿಂದ ಆಚರಿಸಬೇಕು.ಎಲ್ಲಿಯೂ ಗೊಂದಲದ ವಾತಾವರಣ ಇರಬಾರದು.ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಸೀದಿಗಳ ಅಧ್ಯಕ್ಷರು ,ಪದಾಧಿಕಾರಿಗಳು ಸಹಕರಿಸಬೇಕು.
ಎಲ್ಲಾ ವರ್ತಕರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಸಹಕರಿಸಬೇಕು, ಇಲಾಖಾ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ವರ್ತಕರು,ಮಸೀದಿಯ ಪದಾಧಿಕಾರಿಗಳು,ಸಾರ್ವಜನಿಕರು ಉಪಸ್ಥಿತರಿದ್ದರು.