ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯಿಂದ ಐವನ್ ಡಿಸೋಜರಿಗೆ ಅಭಿನಂದನೆ ಸಲ್ಲಿಕೆ

0

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾಗಿ ಆಯ್ಕೆಗೊಂಡ ಎ.ಐ.ಸಿ.ಸಿ.ಯ ಮಾಜಿ ಕಾರ್ಯದರ್ಶಿ ಐವನ್ ಡಿ,ಸೋಜರವರನ್ನು ಜೂ.15ರಂದು ಮಂಗಳೂರಿನಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಪರವಾಗಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆಯವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭ ಕೆ.ಪಿ.ಸಿ.ಸಿ.ಪ್ರಚಾರ ಸಮಿತಿ ಸಂಯೋಜಕ ಕೆ.ಪಿ.ಜಾನಿ ಕಲ್ಲುಗುಂಡಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ರವರು ಉಪಸ್ಥಿತರಿದ್ದರು.