ಮಂಗಳೂರು ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ನೂತನ ಸಂಸದ ಬ್ರಿಜೇಶ್ ಚೌಟರಿಗೆ ಅಭಿನಂದನೆ

0


ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಬಾಲಕೃಷ್ಣ ಡಿ.ಬಿ.ಹಾಗೂ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಸದರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನವನ್ನು ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು . ಮಾಜಿ ಶಾಸಕ ಸಂಜೀವ ಮಠಂದೂರು , ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ , ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ರಕ್ಷಿತ್ ಪುತ್ತಿಲ ಮತ್ತು ಶ್ರೀಮತಿ ಸಾರಿಕಾ ಸುರೇಶ್ ಉಪಸ್ಥಿತರಿದ್ದರು.