ನೆಟ್ಟಾರು ಶಾಲಾ ವಿದ್ಯಾರ್ಥಿಗಳಿಗೆ ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಪುಸ್ತಕ ವಿತರಣೆ

0

ದ.ಕ ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಾರು ಇಲ್ಲಿಯ ಶಾಲಾ ಮಕ್ಕಳಿಗೆ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅವರ ಧರ್ಮಪತ್ನಿ ನೂತನ ಕುಮಾರಿಯವರು ಉಚಿತ ನೋಟ್ ಪುಸ್ತಕ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಪೆರುವಾಜೆ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಎಂ ಎಸ್ ಡಬ್ಲ್ಯೂ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಪ್ರಿಯಾ ಆರ್ ಆಚಾರ್ ಹಾಗೂ ಬೆಳ್ಳಾರೆಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು, ಸುಳ್ಯ ಬಿಜೆಪಿ ಮಂಡಲ ಸಮಿತಿ ಉಪಾಧ್ಯಕ್ಷರಾದ ಆರ್. ಕೆ .ಭಟ್ ಕುರುಂಬುಡೇಲು ಅತಿಥಿಗಳಾಗಿದ್ದರು.

ಸಭಾಧ್ಯಕ್ಷತೆ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ವಿಶ್ವನಾಥ ಪೆಲತ್ತಮೂಲೆ ವಹಿಸಿದ್ದರು.ವೇದಿಕೆಯಲ್ಲಿ ಅಕ್ಷಯ ಯುವಕ ಮಂಡಲ ನೆಟ್ಟಾರು ಇದರ ಅಧ್ಯಕ್ಷ ಪದ್ಮನಾಭ ಕೋಡಿಬೈಲು,ಪ್ರವೀಣ್ ನೆಟ್ಟಾರು ಅವರ ಮಾವ ಶೀನಪ್ಪ ಪೂಜಾರಿ ಹಾಗೂ ಶಾಲಾ ಮುಖ್ಯ ಗುರುಗಳಾದ ನಳಿನಾಕ್ಷಿ ಉಪಸ್ಥಿತರಿದ್ದರು.