ದಿ. ಉಪೇಂದ್ರ ಕಾಮತ್ ಅವರ ಹುಟ್ಟುಹಬ್ಬ ಹಿನ್ನೆಲೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ಹಾಗೂ ಪೋಷಕರ ಸಭೆಯು ಜೂ.22ರಂದು ನಡೆಯಲಿದೆ.

ವಿದ್ಯಾಸಂಸ್ಥೆಯ ಸ್ಥಾಪಕಾದ ದಿ. ಕೆ. ಉಪೇಂದ್ರ ಕಾಮತ್ ಅವರ ಹುಟ್ಟುಹಬ್ಬದ ಅಂಗವಾಗಿ ಸ್ಥಾಪಕರ ದಿನಾಚರಣೆ ನಡೆಯಲಿದ್ದು, ನಿವೃತ್ತ ಅಧ್ಯಾಪಕ ಹಾಗೂ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸಂಯೋಜಕ ಸುಬ್ರಾಯ ನಂದೋಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಚಾಲಕ ಉದ್ಯಮಿ ಕೆ. ಸುಧಾಕರ ಕಾಮತ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ.ಸೀತಾರಾಮ, ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್. ಗೋಪಾಲರಾವ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.